ನಮೋ ವಾಸುದೇವಾ ವಿಚಾರ
ಜಪದಿಂದ ಮನಸ್ಸಿಗೆ ವ್ಯಾಯಾಮ ಮತ್ತು ಶಾಂತಿ..!
"ಜಪ"
★ ಈ ಎರಡು ಅಕ್ಷರಗಳಲ್ಲಿ ಅಡಗಿರುವ ಅರ್ಥ ಮತ್ತು ಶಕ್ತಿಯನ್ನು ಜ್ನಾನಿಗಳಾದ ಸಿದ್ದರು, ಸಾಧುಗಳು, ಋಷಿ, ಮುನಿಗಳು ಮತ್ತು ದೈವ ಭಕ್ತರು ಮಾತ್ರ ಅರಿತಿರುತ್ತಾರೆ.

★ ಈ ಕಾರಣದಿಂದಲೇ ಇವರು ಯಾವಾಗಲೂ ತಮ್ಮ ಇಷ್ಟ ದೈವವನ್ನು ಜಪಿಸುತ್ತಲೇ ಇರುತ್ತಾರೆ.

★ ಜಪ ಎಂಬ ಪದವು "ಜಪಿಸು" ಎನ್ನುವ ಪದದಿಂದ ಮೂಡಿ ಬಂದಿದೆ.

★ "ಜಪ" ಶಬ್ದವನ್ನು ವಿಶ್ಲೇಷಣೆ ಮಾಡಿದಾಗ, ಸಂಸ್ಕೃತ ಭಾಷೆಯಲ್ಲಿ ಈ ರೀತಿ ತಿಳಿಸಲಾಗಿದೆ.

“ "ಜ" ಕಾರೋ ಜನ್ಮ ವಿಚ್ಚೇಧನ
"ಪ" ಕಾರೋ ಪಾಪನಾಶಕ
ತಸ್ಮಾಜ್ಯಪ ಇತಿಪ್ರೊಕ್ತೋ
ಜನ್ಮ ಪಾಪ ವಿನಾಶಕ “

"ಜ"ಕಾರವು ಜನ್ಮ ವಿನಾಶಕವಾದದ್ದೆಂದೂ
"ಪ" ಕಾರವು ಪಾಪಗಳನ್ನು ನಾಶ ಮಾಡುವುದೆಂದೂ,
ಜನ್ಮ ಪವಿತ್ರವಾಗಬೇಕಾದರೆ "ಜಪ" ಅವ್ಶಕವೆಂದಾಗುತ್ತದೆ.

★ "ಜಪ" ಅಂದರೇನು?
ಪರಮಾತ್ಮನನ್ನು ಮಂತ್ರದ ರೂಪದಲ್ಲಾಗಲೀ, ನಾಮ ರೂಪದಲ್ಲಾಗಲೀ ಮನಸ್ಸನಲ್ಲಾಗಲಿ ಧ್ಯಾನಿಸುವುದೇ "ಜಪ",

ಕೆಲವರು ಜೋರಾಗಿ ನಾಮ ಸ್ಮರಣೆ ಮಾಡುತ್ತಾ ಬೇರೆಯವರ ಕಿವಿಗೆ ಕೇಳಿಸುವಂತೆ ಮಾಡುತ್ತಾರೆ. ಈ ರೀತಿ ಮಾಡುವುದರಿಂದ ಪಠಿಸುವವರಿಗೂ, ಕೇಳುವವರಿಗೂ ಏಕ ಕಾಲದಲ್ಲಿ ಫಲ ದೋರಕುತ್ತದೆ.

★ ಜಪಿಸುವ ಮಂತ್ರ ಬೀಜಮಂತ್ರವಾಗಲೀ, ತಾರಕ ಮಂತ್ರವಾಗಲೀ ಅಥವಾ ಇಷ್ಟ ದೇವತಾ ಮಂತ್ರವಾಗಲೀ ಗುರುಗಳಿಂದ ಉಪದೇಶ ಪಡಯಬೇಕೆಂಬ ನಿಯಮವಿದೆ.

★ ಜಪದಲ್ಲಿ ಮೂರು ವಿಧಾನಗಳಿವೆ.

"ವಾಚಿಕ" - ಬೇರೆಯವರ ಕಿವಿಗೆ ಕೇಳಿಸುವಂತೆ ಪಠಿಸುವುದು.

"ಉಪಾಂಶು" - ತುಟಿಗಳು ಅಲುಗಾಡುತ್ತಿದ್ದರೂ ಶಬ್ದವು ಹೊರಗೆ ಕೇಳಿಸದಂತೆ ಜಪ ಮಾಡುವುದು

"ಮಾನಸಿಕ - ಮನಸ್ಸಿನಲ್ಲಿ ಧ್ಯಾನಿಸುವುದು.

★ "ವಾಚಿಕ" ಜಪಕ್ಕಿಂತಲೂ ಹತ್ತು ಪಾಲು ಶ್ರೇಷ್ಟವಾದುದ್ದು "ಉಪಾಂಶು", ಉಪಾಂಶುವಿಗಿಂಲೂ ಮೂರು ಪಟ್ಟು ಶ್ರೇಷ್ಟವಾದುದ್ದು, "ಮಾನಸಿಕ ಜಪ ಆದ್ದರಿಂದ ಮಾನಸಿಕ ಜಪವನ್ನು ಅಭ್ಯಸಿಸುವುದು ಸರ್ವಶ್ರೇಷ್ಟ.

★★★ ಜಪವನ್ನು ಉಪದೇಶಿಸುವವನನ್ನು "ಗುರು" ಎಂದು ಕರೆಯಲಾಗುತ್ತದೆ. ★★★

★★★ ಗುರು ಎಂಬ ಶಬ್ದಕ್ಕೆ ಅರ್ಥ ★★★

★ "ಗು" ಎಂದರೆ ಕತ್ತಲು ಅಥವ ಅಜ್ನಾನ
★"ರು" ಎಂದರೆ ಅದನ್ನು ಪರಿಹರಿಸುವವನು ಎಂದಾಗುತ್ತದೆ.ಗುರುಉಪದೇಶ ಮಾಡುವುದರ ಜೊತೆಗೆಆಶಿರ್ವಾದವನ್ನೂ ಮಾಡುತ್ತಾನೆ.

★ಜಪಸರದಲ್ಲಿ ೧೦೮ ಮಣಿಗಳಿರಬೇಕೆಂಬ ನಿಯಮವಿದೆ.

★ಈ ಮಣಿಗಳು ಉಪನಿಷತ್ತನ್ನು ಪ್ರತಿನಿಧಿಸುತ್ತವೆ.

★ಅಲ್ಲದೆ ಅಷ್ಟೋತ್ತರ ಅತ್ಯಂತ ಗೌರವವನ್ನು ಹೊಂದಿರುವ ಸಂಖ್ಯೆ.

ಭಗವಂತನಿಗೆ ಅಷ್ಟೋತ್ತರ ಪೂಜೆ ಅತ್ಯಂತ ಪ್ರಿಯವಾದುದ್ದು.

★★★ ಜಪದಲ್ಲಿ ವಿಧಗಳಿವೆ ★★★

★ ನಿತ್ಯಜಪ

★ ವೈಯಕ್ತಿಕ ಜಪ

★ ಪ್ರಾಯಶ್ಚಿತ ಜಪ

★ ಅಚಲ ಜಪ

★ ಜಲ ಜಪ

★ ಅಖಂಡ ಜಪ

★ ಪ್ರದಕ್ಷಿಣ ಜಪ

★ ಲಿಖಿತ ಜಪ

★ ಕಾಮ್ಯ ಜಪ

ಈ ಜಪಗಳು ಪ್ರತಿಯೊಂದೂ ವಿಶೇಷ ಅರ್ಥದಿಂದ ಕೂಡಿದ್ದು ಆಯಾ ಸಂರ್ಧಭಗಳಲ್ಲಿ ಪಠಿಸಲಾಗುತ್ತದೆ.

★★★ ಜಪವನ್ನು ಮಾಡುವುದಕ್ಕೆ ಕೆಲವು ನಿಯಮ ನಿಬಂಧನೆಗಳಿವೆ.★★★

ಅವುಗಳೆಂದರೆ,
★ ಜಪ ಮಾಡುವ ಸ್ಥಳವು ಪರಿಶುದ್ದವಾಗಿರಯೂ, ಶಾಂತ ವಾತಾವರಣದಿಂದ ಕೂಡಿರಬೇಕು.

★ ಬರೀ ನೆಲದ ಮೇಲೆ ಕೂತು ಜಪ ಮಾಡಬಾರದು.
ಮರದ ಮಣೆ, ಅಥವ ಚಾಪೆಯ ಮೇಲೆ ಪೂರ್ವಾಭಿಮುಖವಾಗಿ ಅಥವ ಉತ್ತರಾಭಿಮುಖವಾಗಿ ಕುಳಿತು ಕಾಮ, ಕ್ರೋದ, ಲೋಭ, ಮೋಹ, ಮದ, ಮಾತ್ಸರ್ಯಗಳೆಂಬ ಅರಿಷಡ್ವರ್ಗದಿಂದ ಮುಕ್ತನಾಗಿ ಏಕ ಮನಸ್ಸಿನಿಂದ ಜಪಿಸಬೇಕು.

★ ಜಪ ಮಣಿ ಎಣಿಸುವಾಗ ಹೆಬ್ಬೆರಳು ಮೂರು ಮತ್ತು ನಾಲ್ಕನೆಯ ಬೆರಳುಗಳನ್ನು ಮಾತ್ರ ಉಪಯೊಗಿಸಬೇಕು.
★ ತೋರು ಬೆರಳು ಅಹಂಕಾರ ಸೂಚಕವೆಂದು ಪರಿಗಣಿಸಿ ಅದನ್ನು ಕೈಬಿಡಲಾಗಿದೆ.
★ಮಾಡುವ ಜಪವನ್ನು ಲೆಕ್ಕ ಮಾಡಿಕೊಳ್ಳಬೇಕು. "ಅಸಂಖ್ಯಾ ಮಸುರಂ ಯಸ್ಮಾತ್, ತಸ್ಮಾದತೆ ಗಣೀಯತೆ ದೈವಂ" ಎಂಬುದಾಗಿ ತಿಳಿಸಲಾಗಿದೆ.

★ ಇದರ ಅರ್ಥವೆಂದರೆ ಲೆಕ್ಕವಿಲ್ಲದ ಜಪ ಅಸುರ (ರಾಕ್ಷಸ) ಜಪವೆಂದು ಪರಿಗಣಿಸಲ್ಪಡುತ್ತದೆ. ಆದ್ದರಿಂದ ಮಾಡುವ ಜಪಕ್ಕೆ ಲೆಕ್ಕವಿರಬೆಕು.★

★★ ಪ್ರತಿನಿತ್ಯವೂ ಜಪ ಮಡುವುದರಿಂದ ★★

★ ವಿಷಯ ವಸ್ತುಗಳತ್ತ ಹರಿದಾಡುವ ಮಾನಸಿಕ ಚಿಂತನೆಗಳನ್ನು ನಿಯಂತ್ರಿಸುತ್ತದೆ.

★ ಮನಸ್ಸನ್ನು ಭಗವಂತನ ಕಡೆಗೆ ಒಲೆಯುವಂತೆ ಮಾಡು ತ್ತದೆ.

★ ದುಷ್ಕಾರ‍್ಯಗಳನ್ನು ಮಾಡದಂತೆ ತಡೆಹಿಡಿಯುತ್ತದೆ.

★ ಮನಸ್ಸಿಗೆ ಶಾಂತಿ ತರುತ್ತದೆ. ಜಪಿಸುವ ಪ್ರತಿಯೊಂದು ಮಂತ್ರದಲ್ಲಿಯೂ ಚೈತನ್ಯ ಶಕ್ತಿ ಅಡಗಿದ್ದು, ಸಾಧಕನ ಶಕ್ತಿ ಕುಂದಿದಾಗ ಮಂತ್ರಶಕ್ತಿ ಸಾಧನಾ ಶಕ್ತಿಯಾಗಿ ನಿಂತು ಸಾಧಕನಿಗೆ ಹುರಿದುಂಬಿಸುತ್ತದೆ.

★ ರಜೋಗುಣವನ್ನು ಸತ್ವ ಗುಣವನ್ನಾಗಿ ಪರಿವರ್ತಿಸುತ್ತದೆ.

★ ವ್ಯಾಯಾಮದಿಂದ ಶರೀರವು ದೃಢವಾಗಿ ಆರೋಗ್ಯವನ್ನು ಹೊಂದುವಂತೆ, ಜಪದಿಂದ ಮನಸ್ಸಿಗೆ ವ್ಯಾಯಾಮ ದೊರೆತು ಸ್ಥಿರವಾದ ಮನಸ್ಸನ್ನು ಪಡೆಯಲು ಸಹಾಯಕವಾಗುತ್ತದೆ.

★ ಸ್ಥಿರ ಚಿತ್ತದಿಂದ ಮನಸ್ಸಿಗೆ ಶಾಂತಿ ದೊರೆಯುತ್ತದೆ.

★ ಆದರೆ ತೋರಾಣಿಕೆಗಾಗಿ ಮಾಡುವ ಜಪದಿಂದ ಯಾವುದೇ ಪುಣ್ಯಾವಾಗಲೀ, ಪುರುಷಾರ್ಥವಾಗಲೀ ದೊರಕುವುದಿಲ್ಲ.

★ ಜಪ, ತಪ, ಧ್ಯಾನ, ಭಜನೆ, ನರ್ತನ, ಗಾನ, ಇವುಗಳೆಲ್ಲವೂ ಜಪದ ನಾನಾ ಮುಖಗಳು, ಅನುಸರಿಸುವ ರೀತಿ ಬೇರೆ ಬೇರೆಯಾಗಿವೆ.★

★ ಎಲ್ಲಾ ನದಿಗಳೂ ಸಮುದ್ರವನ್ನು ಸೇರುವಂತೆ, ಪೂಜಿಸುವ ಪೂಜೆಗಳು, ಸಲ್ಲಿಸುವ ಪ್ರಾರ್ಥನೆಗಳು, ಯಾವುದೇ ಭಾಷೆಯಲ್ಲಿರಲಿ, ಯಾವುದೆ ಹೆಸರಿನಿಂದಿರಲಿ, ಎಲ್ಲವೂ ಸರ್ವಶಕ್ತನಾದ ಭಗವಂತನಿಗೇ ಸಲ್ಲುತ್ತದೆ.
ಓಂ ನಮೋ ಭಗವತೇ ವಾಸುದೇವಾಯ
ಕೃಷ್ಣ..‌ಕೃಷ್ಣ...ಕೃಷ್ಣ